1
|
ವಸಂತ ಕಾಲದಲ್ಲಿ ಮಳೆಗಾಗಿ ಯೆಹೋವನಿಗೆ ಪ್ರಾರ್ಥಿಸಿರಿ. ಯೆಹೋವನು ಮಿಂಚನ್ನು ಕಳುಹಿಸುವನು; ಆಗ ಮಳೆ ಸುರಿಯುವುದು ಮತ್ತು ದೇವರು ಎಲ್ಲರ ಹೊಲಗಳಲ್ಲಿ ಸಸಿಗಳು ಬೆಳೆಯುವಂತೆ ಮಾಡುವನು. |
2
|
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ. |
3
|
ಯೆಹೋವನು ಹೇಳುವದೇನೆಂದರೆ, “ನಾನು ಕುರುಬರ ಮೇಲೆ ಬಹಳವಾಗಿ ಕೋಪಿಸಿರುವೆನು. ಆ ನಾಯಕರನ್ನು ನಾನು ನನ್ನ ಜನರ ಮೇಲೆ ಜವಾಬ್ದಾರರನ್ನಾಗಿ ಮಾಡಿದ್ದೇನೆ.” ಯೆಹೂದದ ಜನರು ದೇವರ ಮಂದೆಯಾಗಿದ್ದಾರೆ. ಹೇಗೆ ಸಿಪಾಯಿಯು ತನ್ನ ಯುದ್ಧದ ಕುದುರೆಯನ್ನು ಪರಾಂಬರಿತ್ತಾನೋ ಹಾಗೆ ಸರ್ವಶಕ್ತನಾದ ಯೆಹೋವನು ತನ್ನ ಮಂದೆಯನ್ನು ನಿಜವಾಗಿಯೂ ಪರಾಂಬರಿಸುತ್ತಾನೆ. |
4
|
“ಮೂಲೇ ಕಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲು ಮತ್ತು ಮುನ್ನುಗ್ಗುವ ಸೈನ್ಯ, ಇವೆಲ್ಲವು ಒಟ್ಟಾಗಿ ಯೆಹೂದಿಂದ ಬರುವದು. |
5
|
ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು. |
6
|
ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು. |
7
|
ಕುಡಿದು ಮತ್ತರಾದ ಸೈನಿಕರು ಸಂತೋಷಪಡುವಂತೆ ಎಫ್ರಾಯೀಮ್ಯರು ಸಂತಸದಿಂದಿರುವರು. ಮಕ್ಕಳೂ ಆನಂದದಿಂದ ನಲಿದಾಡುವರು. ಅವರೆಲ್ಲರೂ ಯೆಹೋವನ ಜೊತೆಯಲ್ಲಿ ಸಂತೋಷದಿಂದಿರುವರು. |
8
|
“ನಾನು ಶೀಟಿ ಹೊಡೆದು ಎಲ್ಲರನ್ನು ಒಟ್ಟು ಸೇರಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು. |
9
|
ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿ ಬಿಟ್ಟಿರುತ್ತೇನೆ. ಆದರೆ ಆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು. |
10
|
ನಾನು ಅವರನ್ನು ಈಜಿಪ್ಟ್ನಿಂದ ಮತ್ತು ಅಶ್ಯೂರದಿಂದ ಹಿಂದಕ್ಕೆ ತರುವೆನು. ಅವರನ್ನು ಗಿಲ್ಯಾದಿಗೆ ಕರೆದುಕೊಂಡು ಬರುವೆನು. ಅಲ್ಲಿ ಅವರಿಗೆ ಸ್ಥಳ ಸಾಲದು. ಆದುದರಿಂದ ಅವರು ಪಕ್ಕದ ಲೆಬನೋನ್ ಪ್ರಾಂತ್ಯದಲ್ಲಿ ವಾಸಿಸುವಂತೆ ಮಾಡುವೆನು.” |
11
|
ಇದು ಹಿಂದಿನ ಕಾಲದಲ್ಲಿ ದೇವರು ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದಂತೆ ಇರುವದು. ಆತನು ಸಮುದ್ರದ ತೆರೆಗಳನ್ನು ಬಡಿದು ಅದು ಇಬ್ಭಾಗವಾಗುವಂತೆ ಮಾಡಿದನು. ಜನರು ಸಂಕಟದ ಸಮುದ್ರದ ಮಧ್ಯದಲ್ಲಿ ದಾಟಿಹೋದರು. ಯೆಹೋವನು ಹೊಳೆಗಳನ್ನು ಬತ್ತಿಸಿಬಿಡುವನು. ಆತನು ಅಶ್ಯೂರ್ಯದ ಜಂಭವನ್ನೂ ಈಜಿಪ್ಟಿನ ಬಲವನ್ನೂ ಮುರಿಯುವನು. |
12
|
ಯೆಹೋವನು ತನ್ನ ಜನರನ್ನು ಶಕ್ತಿಶಾಲಿಗಳನ್ನಾಗಿ ಮಾಡುವನು. ಅವರು ಆತನ ನಾಮದ ಘನತೆಗೋಸ್ಕರ ಜೀವಿಸುವರು. ಇದು ಯೆಹೋವನ ನುಡಿ. |
Zechariah 10:1 Kannada Language Bible Words basic statistical display
COMING SOON ...