ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.