1
|
ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ. |
2
|
ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ. |
3
|
ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. |
4
|
ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ. |
5
|
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ. |
6
|
ಆದರೆ ಅವನು ಸ್ವಲ್ಪವೂ ಸಂದೇಹ ಪಡದೆ ನಂಬಿಕೆ ಯಲ್ಲಿ ಕೇಳಿಕೊಳ್ಳಲಿ. ಯಾಕಂದರೆ ಸಂದೇಹಪಡುವ ವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆ ಯಂತೆ ಅಲೆದಾಡುತ್ತಿರುವನು. |
7
|
ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ. |
8
|
ಎರಡು ಮನಸ್ಸುಳ್ಳವನು ತನ್ನ ಮಾರ್ಗಗಳ ಲ್ಲೆಲ್ಲಾ ಚಂಚಲನಾಗಿದ್ದಾನೆ. |
9
|
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; |
10
|
ಐಶ್ವರ್ಯ ವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆ ನೆಂದು ಉಲ್ಲಾಸಪಡಲಿ. ಆದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು. |
11
|
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು. |
12
|
ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನ ಮಾಡಿದ ಜೀವದ ಕಿರೀಟ ವನ್ನು ಹೊಂದುವನು; |
13
|
ಯಾವನಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ--ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ಯಾಕಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರನು; ಆತನು ಯಾರನ್ನೂ ಶೋಧಿಸುವದೂ ಇಲ್ಲ. |
14
|
ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ. |
15
|
ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ; ಪಾಪವು ಸಂಪೂರ್ಣವಾದ ಮೇಲೆ ಮರಣ ವನ್ನು ಹಡೆಯುತ್ತದೆ. |
16
|
ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. |
17
|
ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ. |
18
|
ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು. |
19
|
ಆದದರಿಂದ ನನ್ನ ಪ್ರಿಯ ಸಹೋದರರೇ, ಪ್ರತಿ ಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತನಾಡುವದರಲ್ಲಿ ಮತ್ತು ಕೋಪಿಸುವದರಲ್ಲಿ ನಿಧಾನವಾಗಿಯೂ ಇರಲಿ. |
20
|
ಮನುಷ್ಯನ ಕೋಪವು ದೇವರ ನೀತಿಯನ್ನು ನಡಿಸುವದಿಲ್ಲ. |
21
|
ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ. |
22
|
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ. |
23
|
ಯಾವನಾದರೂ ವಾಕ್ಯವನ್ನು ಕೇಳುವವ ನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು. |
24
|
ಇವನು ತನ್ನನ್ನು ನೋಡಿ ಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು. |
25
|
ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು. |
26
|
ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ. |
27
|
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ. |
James 1:11 Kannada Language Bible Words basic statistical display
COMING SOON ...