1
|
ನನ್ನ ಸಹೋದರರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ. |
2
|
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಪರಿ ಪೂರ್ಣನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿ ಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ. |
3
|
ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ. |
4
|
ಹಡಗುಗಳನ್ನು ಸಹ ನೋಡಿರಿ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿ ಕೊಂಡು ಹೋಗುತ್ತವೆ. ಆದಾಗ್ಯೂ ಬಹು ಸಣ ಚುಕಾಣಿಯಿಂದ ಅವುಗಳನ್ನು ನಡಿಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ತಿರುಗಿಸುತ್ತಾನೆ. |
5
|
ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. |
6
|
ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. |
7
|
ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. |
8
|
ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ. |
9
|
ಅದೇ ನಾಲಿಗೆಯಿಂದ ತಂದೆಯಾದ ದೇವರನ್ನು ಕೊಂಡಾಡುತ್ತೇವೆ; ಆದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಉಂಟುಮಾಡಲ್ಪಟ್ಟ ಮನುಷ್ಯರನ್ನು ನಾವು ಶಪಿಸುತ್ತೇವೆ. |
10
|
ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು. |
11
|
ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ? |
12
|
ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು. |
13
|
ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. |
14
|
ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. |
15
|
ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. |
16
|
ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. |
17
|
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ. |
18
|
ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. |
James 3:4 Kannada Language Bible Words basic statistical display
COMING SOON ...