1
|
ಆಗ ಇಗೋ, ಕುರಿಮರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ ಇದ್ದರು; ಅವರ ಹಣೆಗಳ ಮೇಲೆ ಆತನ ತಂದೆಯ ಹೆಸರು ಬರೆಯ ಲ್ಪಟ್ಟಿತು. |
2
|
ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು. |
3
|
ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು. |
4
|
ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು. |
5
|
ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ. |
6
|
ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು. |
7
|
ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು. |
8
|
ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು. |
9
|
ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ |
10
|
ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. |
11
|
ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು. |
12
|
ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ. |
13
|
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ |
14
|
ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು. |
15
|
ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. |
16
|
ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. |
17
|
ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. |
18
|
ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. |
19
|
ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು. |
20
|
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. |
Revelation 14:1 Telugu Language Bible Words basic statistical display
COMING SOON ...